Skip to main content

Glassdoor ಸಮುದಾಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು


ನಾನು ಜೀವನದಲ್ಲಿ ಗೊಂದಲದಿಂದ, ದಿಕ್ಕತೋಚದ ಸ್ಥಿತಿಯಿಂದ ಕಳೆಯುತ್ತಿದ್ದ ಸಂದರ್ಭದಲ್ಲೇ ಈ ಸಮುದಾಯದಲ್ಲಿ ಓದಿದ ನಿಜವಾದ ಅನುಭವಗಳು ನನಗೆ ದಾರಿ ತೋರಿಸಿದವು.

ನೀವು ಶೇರ್ ಮಾಡಿರುವ ವಿಷಯಗಳು ಅಚ್ಚುಮೆಚ್ಚಾದ ಸತ್ಯಗಳು. ಅವುಗಳು ನಮ್ಮ ಸಂಸ್ಥೆ 'ಕಾವ್ಯ ಡಿಜಿಟಲ್ ಜಿವಿಟಿ'ಗೂ ಹಾಗೂ ನನ್ನ ಜೀವನಕ್ಕೂ ಆತ್ಮಾವಲೋಕನ ಮಾಡುವ ಅವಕಾಶ ಮಾಡಿಕೊಟ್ಟಿವೆ. ನಿಮ್ಮ ಮಾತುಗಳು ನನಗೆ ಜೀವನದಲ್ಲಿ ಮತ್ತೊಮ್ಮೆ ನಿಲ್ಲಲು, ಯೋಚಿಸಲು ಮತ್ತು ಬದುಕನ್ನು ಹೊಸ ದೃಷ್ಟಿಯಿಂದ ನೋಡುವ ಧೈರ್ಯವನ್ನ ಹೆಚ್ಚಿಸಿದವು.

ಇಂದು ನಾನು ಮನಸ್ಸಿನಲ್ಲಿ ನಿಧಾನವಾಗಿ ನೆಮ್ಮದಿಯನ್ನು ಕಾಣುತ್ತಿದ್ದೇನೆ. ನಮ್ಮ ಸಂಸ್ಥೆ ಒಂದು ಚಿಕ್ಕ ವ್ಯಾಪಾರ ಸಂಸ್ಥೆಯಾದರೂ, ಅನೇಕ ಜನರಿಗೆ ಕೆಲಸ ನೀಡಿದೆ ಸತ್ಯ, ನೀವು ಇದನ್ನು ಗಮನಿಸಿದರಲ್ಲದೆ ಗುರುತಿಸಿದ್ದೀರಿ ಎಂಬುದು ನಮಗೆ ಹೆಮ್ಮೆ ಉಂಟುಮಾಡುತ್ತದೆ. ನಿಮ್ಮ ಮಾಹಿತಿ ಮತ್ತು ಪ್ರಾಮಾಣಿಕ ಅಭಿಪ್ರಾಯಗಳಿಂದ ನಮ್ಮ ಪರಿಶ್ರಮಕ್ಕೆ ಬೆಲೆ ಸಿಕ್ಕಂತಾಯ್ತು.

ಕೆಲವೊಮ್ಮೆ, ನಮ್ಮನ್ನು ಎಂದೂ ಭೇಟಿಯಾಗದವರು ಹೇಳುವ ಒಂದೊಂದು ನಿಖರವಾದ ಮಾತು ಸಹ ಒಬ್ಬರ ಜೀವನವನ್ನ ಬದಲಾಯಿಸಬಲ್ಲದು – ಅದು ನನ್ನ ಬದುಕಿನಲ್ಲಿ ಈ ಸಮುದಾಯದಿಂದಾಗಿ ಸಾಧ್ಯವಾಯಿತು.

ನಮ್ಮ ಜೀವನದಲ್ಲಿ ನಡೆದ ಕೆಲ ಅನಿರೀಕ್ಷಿತ ಘಟನೆಗಳಿಂದ ಹೊರಬರಲು ಸಾಕಷ್ಟು ದಿನ ಬೇಕಾಯಿತು. ನಾನು ತಡವಾಗಿ ಧನ್ಯವಾದ ಹೇಳುತ್ತಿದ್ದೇನೆ; ಈ ವಿಳಂಬಕ್ಕೆ ಕ್ಷಮೆಯಿರಲಿ.

ನಿಮ್ಮ ಸಂಸ್ಥೆ ಹಾಗೂ ನಿಮ್ಮ ಸಹಾಯಕ್ಕಾಗಿ ನಾನು ಸದಾ ಕೃತಜ್ಞನಾಗಿರುತ್ತೇನೆ. ನೀವು ನಮ್ಮ ಮೇಲೆ ತೋರಿಸಿದ ಗೌರವಕ್ಕೆ ಧಕ್ಕೆ ಆಗದಂತೆ, ನಾನು ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಣೆಗಾರಿಕೆಯಿಂದ ನಡೆದುಕೊಳ್ಳುತ್ತೇನೆ ಎಂಬ ಭರವಸೆಯನ್ನು ಇಲ್ಲಿ ವ್ಯಕ್ತಪಡಿಸುತ್ತೇನೆ.

ನಾನೂ ಸಹ ನಿಮ್ಮೊಳಗಿನ ಒಬ್ಬ ನಿರಂತರ ಕಲಿಯುವವನು ಮತ್ತು ಬದುಕು ಗೆಲ್ಲುವ ಪ್ರಯತ್ನದಲ್ಲಿರುವವನು.

ಧನ್ಯವಾದಗಳು ಗ್ಲಾಸ್‌ಡೋರ್‌ ಕಮ್ಯೂನಿಟಿ ತಂಡ. 

Popular posts from this blog

ಅನುಭವಗಳ ಅಗ್ರಜ – ಒಬ್ಬ ಪೋಟೋಗ್ರಾಫರ್ ಜೀವನ ಯಾನ

                                            ಪ್ರತಿಯೊಬ್ಬರ ಬದುಕಿನಲ್ಲಿಯೂ ಇರುವಂತಹ ನಿಜವಾದ ಕ್ಷಣಗಳನ್ನು ಸೆರೆಹಿಡಿಯುವುದು ಎಲ್ಲರಿಗೂ ಸಾಧ್ಯವಿಲ್ಲ . ಆದರೆ ಕೆಲವರು ಅದನ್ನೇ ತಮ್ಮ ಜೀವನದ ಧ್ಯೇಯವನ್ನಾಗಿ ಮಾಡಿಕೊಂಡು , ಹೃದಯದೊಳಗಿನ ಸಂವೇದನೆಗಳನ್ನು ಕ್ಯಾಮೆರಾದ ಕಣ್ಣಲ್ಲಿ ಹುರಿದುಂಬಿಸುತ್ತಾರೆ . ಇಂದಿನ ಬ್ಲಾಗ್ ‌ ನಲ್ಲಿ ನಾವು ಪರಿಚಯಿಸಿಕೊಳ್ಳುತ್ತಿರುವ ವ್ಯಕ್ತಿ ಒಬ್ಬ ಸಾಮಾನ್ಯವಾಗಿ ಕಾಣುವ ಪೋಟೋಗ್ರಾಫರ್ ‌ ಅಲ್ಲ – ಇವನು ಜೀವನದ ನಿಜವಾದ ಅರ್ಥವನ್ನು ತಲುಪಿರುವ ಅನುಭವಿಗಳ ಅಗ್ರಜ . ಬಡವ - ಶ್ರೀಮಂತ ಎಂಬ ಬೇಧವಿಲ್ಲದೇ , ಎಲ್ಲರಲ್ಲೂ ಸಮಾನವಾದ ಭಾವನೆಗಳನ್ನು ಗುರುತಿಸಿ , ಸಾವಿರಾರು ಹಬ್ಬ - ಹರಿದಿನಗಳನ್ನ , ನಗೆಯ - ನಲ್ಮೇಯ ಕ್ಷಣಗಳನ್ನು ತನ್ನ ಕ್ಯಾಮೆರಾ ಕಣ್ಣಿನ ಮೂಲಕ ಸೆರೆಹಿಡಿದಿರುವ ಜೀವಂತ ಕಥೆಯಿದು . ಇವನು ಒಬ್ಬ ಛಾಯಾಗ್ರಾಹಕ ಮಾತ್ರವಲ್ಲ – ಇವನು ಜನರ ನಗೆಯ ಹಿಂದೆ ಇರುವ ನಿಜವಾದ ಹೃದಯ ಬಡಿತವನ್ನು ಅರಿಯುವ ಕಲಾವಿದ . ಈ ಕಥೆಯ ಮೂಲಕ , ನೀವು ನೋಡುವಿರಿ ಒಂದಿಷ್ಟು ಅಕ್ಷರಗಳನ್ನ ಮಾತ್ರವಲ್ಲ , ಆದರೆ ಅವುಗಳ ಹಿಂದೆ ಇರುವ ಜೀವವನ್ನು .             ...

ಇದು ಕರ್ನಾಟಕದ ಇತಿಹಾಸದಿಂದ ಪ್ರೇರಿತವಾದ ಒಂದು ಸಾರ್ಥಕ ಕಥೆ

                                                        ಕಲೆಯ ನೆರಳಲ್ಲಿಅರಳಿದ ಪ್ರತಿಭೆ.                  ವಿಜಯನಗರ ಸಾಮ್ರಾಜ್ಯ ತನ್ನ  ಗತವೈಭ ತೆಯ ಶಿಖರದಲ್ಲಿದ್ದ ಕಾಲವೊಂದಿತ್ತು . ಇದರ ಜೀವನದಿ ತುಂಗಭದ್ರಾ ಈ ನದಿಯ ದಡದಲ್ಲಿ ತಂಗಾಳಿ ಸೂಸುವ ಒಂದು ಸುಂದರ ಹಳ್ಳಿ ಇತ್ತು . ಆ ಹಳ್ಳಿಯಲ್ಲಿ ಶಿವಣ್ಣ ಎಂಬ ಯುವಕನಿದ್ದ . ಅವನು ಸಾಮಾನ್ಯ ಶಿಲ್ಪಿಯಾಗಿದ್ದರೂ , ಕಲ್ಲು ಕೂಡಾ ಮಾತಾಡುವಂತೆ ಮಾಡುವ, ಅಧ್ಬುತ  ಕಲೆ ಆತನಿಗೆ ದೈವಿದತ್ತವಾಗಿ  ಒಲಿದಿತ್ತು . ಒಂದು ದಿನ ,  ರಾಜಕೀಯ ಸ್ಥಿತಿಗತಿಗಳಿಂದ ಹಂಪೆಯಲ್ಲಿ ಹೊಸ ಮಂಟಪ ನಿರ್ಮಿಸಲು ಆದೇಶವಾಯಿತು . ಸಾಮ್ರಾಜ್ಯದ ಹಿರಿಯ ಶಿಲ್ಪಿಗಳು  ಕಾಯಕಕ್ಕೆ  ಸಿದ್ಧರಾಗಿದ್ದರು , ಆದರೆ ರಾಜನ ದೃಷ್ಠಿ ಶಿವಣ್ಣನ ಕಲೆಯ ಮೇಲೆಯೇ ಬಿದ್ದಿತು . ಆತನಿಗೆ ಅವಕಾಶ ಕೊಡಲಾಯಿತು . ಶಿವಣ್ಣನು ಹಂಪೆಗೆ ಹೋಗಿ , ಹಲವು ತಿಂಗಳುಗಳ ತನಕ ದುಡಿಯುತ್ತಾ ಹಲವು ವಿಶಿಷ್ಟವಾದ ಸೃಜನಶೀಲತೆಯಿಂದ ತುಂಬಿದ    ಶಿಲ್ಪಗಳನ್ನ ನಿರ್ಮಿಸಿದ .   ಇದರಲ್ಲಿ ವಿಶೇಷ ಎನ್ನುವಂತ ಶಿಲ...

ಹಸಿರಾದ ತುಂಗಭದ್ರಾ: ನದಿಯ ನಿಶ್ಯಬ್ದ ಕಣ್ಣೀರು ಅಥವಾ ನಮ್ಮ ನಿರ್ಲಕ್ಷ್ಯದ ಪ್ರತಿಫಲವೆ ?

                                               ನದಿ ಹರಿಯುವುದು ಕೇವಲ ಪ್ರಕೃತಿ ಸ್ವಭಾವವಾದರು, ಅದರಲ್ಲಿ ನಮ್ಮ ಜೀವನದ               ಕಥೆಗಳೂ, ಸಂಸ್ಕೃತಿಯೂ, ಬದುಕಿನ ಶ್ವಾಸವೂ ಸೇರಿದೆ            ಒಂದು ಕಾಲದಲ್ಲಿ ತುಂಗಭದ್ರಾ ನದಿಯ ತೀರದಲ್ಲಿ ಜನ ಬದುಕು ಕಟ್ಟಿಕೊಂಡು ನದಿಗೆ ನಮಿಸುತಿದ್ದರು. ಕರ್ನಾಟಕದ ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ಆಂದ್ರ,ತೆಲಂಗಾಣದ ಕೆಲ ಜಿಲ್ಲೆಗಳ ಜೀವನಾಧಾರವಾಗಿರುವ ಈ ನದಿ ಸಾರ್ವಜನಿಕ ಜೀವನದಲ್ಲಿ ಅಮೂಲ್ಯ ಮತ್ತುಅವಶ್ಯಕ . ಆದರೆ ಇಂದು, ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಇದು ಪ್ರಕೃತಿಯ ಹಸಿರು ಅಲ್ಲ... ಇದು ಚಿಂತೆ, ಕಳವಳ, ವಿಷಾದದ ಹಸಿರು! ಇದು ಏಕೆ ಆಗುತ್ತಿದೆ? ತುಂಗಭದ್ರಾ ನದಿಯಲ್ಲಿ ಇತ್ತೀಚೆಗೆ ಕಂಡುಬರುತ್ತಿರುವ ಹಸಿರು ಬಣ್ಣದ ನೀರಿನ ಹಿಂದೆ ಹಲವಾರು ಕಾರಣಗಳಿರಬಹುದು: ಅತಿಯಾದ ಕಸದ ಹರಿವು – ಹಳ್ಳಕೊಳ್ಳಗಳಲ್ಲಿನ  ಮೂಲಕ ಹಿಡಿದು, ಕೈಗಾರಿಕೆಗಳ ತನಕ, ನದಿಗೆ ಸುರಿಯುತ್ತಿರುವ ಕಸದ ಪ್ರಮಾಣ ಗಣನೀಯ ಮಟ್ಟದಲ್ಲಿ ಹೆಚ್ಚಾಗಿದೆ. Algae Bloom (ಹಸುರು ಶಿಲೀಂಧ್ರವೃತ್ತಿ) – ನೀರಿನಲ್ಲಿ excessive nutrients (ಜೈವಿಕ ತತ್ವಗಳು) ಸ...